ನ್ಯೂಸ್ ನಾಟೌಟ್: ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟ ಇವರು ದ ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾಗಿ ಆಯ್ಕೆಯಾಗಿದ್ದಾರೆ. ಅವರು ಸುಬ್ರಹ್ಮಣ್ಯ ದ ಬಿಳಿನೆಲೆ ಗ್ರಾಮದ ಕೈಕಂಬ ದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ.ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿಗಳ ಸುಪುತ್ರ ರಾಗಿದ್ದಾರೆ.