ನ್ಯೂಸ್ ನಾಟೌಟ್: ಕೇಂದ್ರ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ನಡೆಸಿದ ದಾಳಿಯಲ್ಲಿ ಭಾರಿ ಪ್ರಗತಿ ಸಾಧಿಸಿದ್ದು, ಜಾರ್ಖಂಡ್ ನ ಬೊಕಾರೊದಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದ್ದ ನಕ್ಸಲ್ ನಾಯಕ ಸೇರಿ 8 ಮಂದಿ ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಇಂದು(ಎ.21) ಬೆಳಗ್ಗೆ ಕೇಂದ್ರ ಮೀಸಲು ಪೊಲೀಸ್ ಪಡೆ, ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ ಕಮಾಂಡೋಗಳ ಅರಣ್ಯ ಯುದ್ಧ ಘಟಕ ಮತ್ತು ಜಾರ್ಖಂಡ್ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿದ್ದರು.
ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕನ ಪತ್ತೆಗೆ ಸರ್ಕಾರವು 1 ಕೋಟಿ ರೂ. ಬಹುಮಾನ ಫೋಷಿಸಿತ್ತು.
ಇದೀಗ ಕೇಂದ್ರ ಮೀಸಲು ಪೊಲೀಸ್ ಪಡೆ ಆತನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಕಾರ್ಯಚರಣೆ ವೇಳೆ 2 ಐಎನ್ ಎಸ್ ಎಎಸ್ ರೈಫಲ್ ಗಳು, 1ಸೆಲ್ಫ್ ಲೋಡಿಂಗ್ ರೈಫಲ್ ಮತ್ತು 1 ಪಿಸ್ತೂಲ್ ವಶಕ್ಕೆ ಪಡೆಯಲಾಗಿದೆ.
ಏಪ್ರಿಲ್ ಆರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಿಂಸೆಯಿಂದ ಬದಲಾವಣೆ ತರಲು ಸಾಧ್ಯವಿಲ್ಲ ಎಂದು ಹೇಳಿ ನಕ್ಸಲರಿಗೆ ಶಸ್ತ್ರಾಸ್ತ್ರ ತ್ಯಜಿಸುವಂತೆ ಕರೆ ನೀಡಿದ್ದರು. ಛತ್ತೀಸ್ ಗಢದಲ್ಲಿ ನಕ್ಸಲ್ ಮುಕ್ತ ಎಂದು ಘೋಷಿಸಲಾದ ಎಲ್ಲಾ ಗ್ರಾಮಗಳಿಗೆ ಅಭಿವೃದ್ಧಿ ನಿಧಿಯಾಗಿ 1 ಕೋಟಿ ರೂ.ಗಳನ್ನು ಘೋಷಿಸಿದ ಅವರು, ಶರಣಾದ ನಕ್ಸಲರು ಸರ್ಕಾರದ ಸಹಾಯದಿಂದ ಸುರಕ್ಷಿತ ಮತ್ತು ಗೌರವಾನ್ವಿತ ಜೀವನವನ್ನು ನಡೆಸುವಂತೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮದುವೆಯಲ್ಲಿ ವರನಿಗೆ ನೀಲಿ ಬಣ್ಣದ ಡ್ರಮ್ ಉಡುಗೊರೆ ಕೊಟ್ಟ ಸ್ನೇಹಿತರು..! ಕೊಲೆ ಪ್ರಕರಣ ನೆನಪಿಸಿದ ವೈರಲ್ ವಿಡಿಯೋ..!
ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್..! ರಾವಣ ಸಿನಿಮಾ ಶೂಟಿಂಗ್ ಗೆ ತಯಾರಿ