ಬೆಂಗಳೂರು: ಗುಜರಾತ್ ಸರಕಾರ ಮಾದರಿಯಲ್ಲಿ ರಾಜ್ಯದ ಶಾಲಾ ಪಠ್ಯಕ್ರಮ ಪುಸ್ತಕದಲ್ಲಿ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಅಳವಡಿಸಲು ಸರ್ಕಾರ ಮುಂದಾದಂತಿದೆ.
ಈ ಬಗ್ಗೆ ನಿನ್ನೆ ಮಾಧ್ಯಮ ಪ್ರತಿನಿಧಗಳೊಂದಿಗೆ ಮಾತನಾಡಿದರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿನ ನಾಗೇಶ್, ಈ ವರ್ಷ ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆಯನ್ನು ಅಳವಡಿಸುವುದಿಲ್ಲ, ಮುಂದಿನ ವರ್ಷ ನೋಡೋಣ,ಪಠ್ಯ ಪುಸ್ತಕ ರಚನಾ ಸಮಿತಿ ಸಮಾಲೋಚನೆ ನಡೆಸಿ ಮುಖ್ಯಮಂತ್ರಿಗಳು, ಶಿಕ್ಷಣ ತಜ್ಞರ ಮುಂದಿಡಲಾಗುವುದು ಎಂದು ಹೇಳಿದ್ದಾರೆ.
ಹಂತಹಂತವಾಗಿ ಶಾಲಾ ಪಠ್ಯಕ್ರಮದಲ್ಲಿ ನೈತಿಕ ಮೌಲ್ಯ ಪಾಠಗಳನ್ನು ಅಳವಡಿಸಿಕೊಳ್ಳಲು ಗುಜರಾತ್ ಸರ್ಕಾರ ಮುಂದಾಗಿದೆ ಎಂದು ಕೇಳಿ ತಿಳಿದಿದ್ದೇವೆ. ಶಾಲಾ ಶಿಕ್ಷಣದ ಪಠ್ಯಕ್ರಮದಲ್ಲಿ ನೈತಿಕ ವಿಜ್ಞಾನ ಸೇರಿಸುವ ಕುರಿತು ಪೋಷಕರು, ಸಮಾಜದ ಚಿಂತಕರ ಒತ್ತಾಯ, ಬೇಡಿಕೆ ಹೆಚ್ಚಾಗುತ್ತಿದೆ ಎಂದು ಸಚಿವ ಬಿ ಸಿ ನಾಗೇಶ್ ಹೇಳಿದ್ದರು.