ನ್ಯೂಸ್ ನಾಟೌಟ್: ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ಗೆ ದೂರು ಸಲ್ಲಿಸಿದ್ದಾರೆ.
ಇದೇ ರೀತಿ ಉಡುಪಿಯಲ್ಲೂ ಚೇತನ್ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಕಾಂತಾರ ಸಿನಿಮಾ ವಿಚಾರವಾಗಿ ಚೇತನ್ ಅವರು ಅಭಿಪ್ರಾಯ ತಿಳಿಸಿದ್ದರು.