ನ್ಯೂಸ್ ನಾಟೌಟ್ : ಕನ್ನಡ ಚಿತ್ರರಂಗದಲ್ಲಿ ಕಿಚ್ಚನಾಗಿ ಎಎಸ್ಎಸ್ಎಲ್ಸಿ ರಂಗನಾಗಿ ಹತ್ತು ಹಲವು ಸಿನಿಮಾಗಳನ್ನು ಮಾಡಿದ ಕಿಚ್ಚ ಸುದೀಪ್ ರಾಜಕೀಯ ಪ್ರವೇಶ ಮಾಡುವ ಸಾಧ್ಯತೆ ಬಗ್ಗೆ ಸ್ಫೋಟಕ ವರದಿಯೊಂದು ಹೊರ ಬಿದ್ದಿದೆ.
ಕಾಂಗ್ರೆಸ್ ಪಕ್ಷದಿಂದ ಬಹಿರಂಗ ಸುದೀಪ್ ಗೆ ಆಫರ್ ಬಂದಿದ್ದು ಶಿವಮೊಗ್ಗ ಅಥವಾ ಚಿತ್ರದುರ್ಗದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆದಿದೆ. ಕನ್ನಡದ ಖ್ಯಾತ ನಟಿ ರಮ್ಯಾ ಅವರ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ತರಲು ಎಲ್ಲ ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಬಗ್ಗೆ ಸುದೀಪ್ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎಸ್ ಟಿ ಸಮುದಾಯದ ಮತಗಳನ್ನು ಸೆಳೆಯುವುದಕ್ಕೆ ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದ್ದು ಸುದೀಪ್ ಅವರನ್ನು ಬಳಸಿಕೊಳ್ಳುವ ಮೂಲಕ ಸಮುದಾಯದ ಒಲೈಕೆಗೆ ಮುಂದಾಗಿದೆ.