ನ್ಯೂಸ್ ನಾಟೌಟ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪದಲ್ಲಿ ಮೈಸೂರಿನ ದಿಲೀಪ್ ಗೌಡ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಲಿಂಗಾಯತ ಸಮುದಾಯದ ವಿರುದ್ಧ ಸಂತೋಷ್ ಹೇಳಿಕೆ ನೀಡಿದ ರೀತಿ ಪತ್ರಿಕಾ ವರದಿ ಸೃಷ್ಟಿ ಮಾಡಿದ್ದ. ಈ ಹಿನ್ನೆಲೆಯಲ್ಲಿ ಬಿಜೆಪಿ ದೂರು ನೀಡಿತ್ತು. ದೂರನ್ನು ಆಧರಿಸಿ ಮೈಸೂರು ನಗರ ಪೊಲೀಸರು ದಿಲೀಪ್ ಗೌಡನನ್ನು ಬಂಧಿಸಿದ್ದಾರೆ.