ನ್ಯೂಸ್ ನಾಟೌಟ್: ಕಾರೊಂದು ಅಪಘಾತಕ್ಕೀಡಾದ ವೇಳೆ ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಕಾರಿನಲ್ಲೇ ಕಾರ್ಯಕ್ರಮಕ್ಕೆ ಕಳುಹಿಸುವ ಮೂಲಕ ಹಿಂದೂ ನಾಯಕ ಅರುಣ್ ಪುತ್ತಿಲ ಮಾನವೀಯತೆ ಮೆರೆದಿದ್ದಾರೆ.
ಶುಂಠಿಕೊಪ್ಪದಿಂದ ಮುಡಿಪಿಗೆ ಕಾರಿನಲ್ಲಿ ಕುಟುಂಬ ಸಮೇತರಾಗಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಮುಕ್ರಂಪಾಡಿನ ತಿರುವಿನಲ್ಲಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಈ ವೇಳೆ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಅರುಣ್ ಪುತ್ತಿಲ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹಾಗೂ ತಮ್ಮ ಕಾರಿನಲ್ಲೇ ಮುಡಿಪಿನ ಕಾರ್ಯಕ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.