ನ್ಯೂಸ್ ನಾಟೌಟ್: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿನಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಲಾಗಿತ್ತು.
ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್, ದ.ಕ. ಜಿಲ್ಲಾ ಪೊಲೀಸ್ ಹಾಗೂ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲಾಗುವುದು ಎನ್ನುವ ಭರವಸೆಯನ್ನು ಮುಸ್ಲಿಂ ಮುಖಂಡರು ನೀಡಿದ್ದಾರೆ.
ಸಭೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್, ಜಿಲ್ಲಾಧಿಕಾರಿ ಮುಳೈ ಮುಗಿಲನ್, ದ.ಕ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಹಲವಾರು ಅಧಿಕಾರಿಗಳು ಹಾಜರಿದ್ದರು.