ನ್ಯೂಸ್ ನಾಟೌಟ್: ರಾಷ್ಟ್ರೀಯ ಓದುವ ದಿನದಂಗವಾಗಿ ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ-ಕುರುಂಜಿಬಾಗ್ ನೇತೃತ್ವದಲ್ಲಿ ಪುಸ್ತಕ ವಿತರಣೆ ಮತ್ತು ಓದುವ ಹವ್ಯಾಸದ ಬಗ್ಗೆ ಮಾಹಿತಿ ಕಾರ್ಯಕ್ರಮ ಸುಳ್ಯದ ಜ್ಯೋತಿ ಸರ್ಕಲ್ ಬಳಿ ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಎಳವೆಯಲ್ಲೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಅದರಲ್ಲಿರುವ ವಿಚಾರಧಾರೆಗಳನ್ನು ಇನ್ನೊಬ್ಬರಿಗೆ ತಿಳಿಸಬೇಕು ಆಗ ನಮ್ಮ ಜ್ಞಾನ ವೃದ್ಧಿಯಾಗುತ್ತದೆ. ಪ್ರತಿ ಶಾಲೆಯಲ್ಲೂ ಗ್ರಂಥಾಲಯಗಳ ಸದ್ಬಳಕೆಯಾಗಬೇಕು ಎಂದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕೈ ನಟರಾಜನ್, ಕೆವಿ.ಜಿ. ಆಸ್ಪತ್ರೆಯ ಡಾ. ನವ್ಯಾ, ಡಾ. ದಿನೇಶ್, ಶಾಲೆಯ ಮೇಲ್ವಿಚಾರಕಿ ಶೀಲಾವತಿ, ಸಹಶಿಕ್ಷಕಿ ಹೇಮಲತಾ, ಮಲ್ಲಿಕಾ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ರವಿರಾಜ್ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ವತಿಯಿಂದ ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಗೆ ನೀಡಲಾಯಿಯಿತು ಡಾ. ಸ್ನೇಹ ಮತ್ತು ಡಾ.ಲೇಖನ್ ಪುಸ್ತಕ ಓದಿನ ಬಗ್ಗೆ ಮಾಹಿತಿ ನೀಡಿದರು.