ನ್ಯೂಸ್ ನಾಟೌಟ್ : ಎಸ್ ಎಸ್ ಎಲ್ ಸಿ ಮುಗಿಸಿ ಪಿಯುಸಿ ಓದಲು ಮುಂದಾಗಿದ್ದ ವಿದ್ಯಾರ್ಥಿನಿಯೋರ್ವಳು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತ ವಿದ್ಯಾರ್ಥಿನಿ.
ಈಗ ತಾನೆ ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿರುವಾಗಲೇ ಈ ದುರಂತ ಸಂಭವಿಸಿದೆ. ಈ ನಡುವೆ ಆಕೆ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಚೇತರಿಸಿಕೊಂಡು ಮನೆಗೆ ಹೋಗಿದ್ದಳು. ಆದರೆ ವಿಧಿಲೀಲೆಯೆಂದರೆ ಮತ್ತೆ ಆಕೆ ಆರೋಗ್ಯದಲ್ಲಿ ಏರು ಪೇರು ಕಂಡು ಬಂದಿದೆ. ತಕ್ಷಣ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.