ನ್ಯೂಸ್ ನಾಟೌಟ್: ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಶೇಖಮಲೆ ಜಾರತ್ತಾರು ಎಂಬಲ್ಲಿ ನಡೆದಿದೆ.
ಮೇ31 ರಂದು ಮಧ್ಯರಾತ್ರಿ ಜಾರತ್ತಾರು ರಾಮ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದೆ. ಈ ವೇಳೆ ರಾಮ ಕೊಟ್ಟಿಗೆಯಲ್ಲಿ ಮಲಗಿದ್ದರು ಎಂದು ತಿಳಿದು ಬಂದಿದೆ. ಮಲಗಿದ್ದಲ್ಲಿಗೆ ಸಿಡಿಲು ಬಡಿದುದರಿಂದ ಅವರು ಹಾಕಿಕೊಂಡಿದ್ದ ಬಟ್ಟೆ, ಚಾಪೆ ಸುಟ್ಟು ಹೋಗಿದೆ. ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.