ನ್ಯೂಸ್ ನಾಟೌಟ್: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ ಫೆಡರೇಷನ್ (ಎಸ್ ಎಸ್ ಎಫ್) 50ನೇ ವಾರ್ಷಿಕೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನವನ್ನು ಭಾನುವಾರ (ಸೆ.10)ರಂದು ಉದ್ಯಾನನಗರಿ ಬೆಂಗಳೂರಿನಲ್ಲಿಹಮ್ಮಿಕೊಳ್ಳಲಾಗಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಳ್ಯದಿಂದ 2 ಸಾವಿರಕ್ಕಿಂತ ಹೆಚ್ಚಿನ ಜನ ಭಾಗವಹಿಸಲಿದ್ದಾರೆ. ಶನಿವಾರ ರಾತ್ರಿಯೇ ಸುಮಾರು 20 ಬಸ್ ಗಳಲ್ಲಿ ಸುಳ್ಯದಿಂದ ಹೊರಟಿದ್ದಾರೆ. ರಾಜ್ಯದ ವಿವಿಧ ಕಡೆಗಳಿಂದ ಒಟ್ಟು 5 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ.
ಎಸ್ ವೈ ಎಸ್ ರಾಜ್ಯ ಸಮಿತಿ ಸದಸ್ಯರಾದ ಸಿದ್ದಿಕ್ ಕಟ್ಟೆಕರ್, ಕರ್ನಾಟಕ ಮುಸ್ಲಿಂ ಜಮಯ್ತ್ ಸದಸ್ಯರು ಆದ ಹಮೀದ್ ಬಿಜ ಕೊಚ್ಚಿ, ಎಸ್ ವೈ ಎಸ್ ಕರ್ನಾಟಕ ಮುಸ್ಲಿಂ ಜಮಾಯತ್ ಸುಳ್ಯದ ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವ ಕುಮಾರ್, ಸ್ಪೀಕರ್ ಯು ಟಿ ಖಾದರ್, ಗೃಹ ಸಚಿವ ಪರಮೇಶ್ವರ್, ಸಚಿವ ಜಮೀರ್ ಅಹ್ಮದ್, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ತಮಿಳುನಾಡು ಸಚಿವ ಗಿಂಜಿ ಮಸ್ತಾನ್, ಟಿಎನ್ ಪ್ರತಾಪನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.