ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದೆ. ಅಂತಹ ಪ್ರಕರಣಗಳ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ಮಹಿಳೆಯೊಬ್ಬರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡು ಬಳಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ.
ಮೃತ ಮಹಿಳೆಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಆಕೆ ಪತಿ ಶಿವಕುಮಾರ್, ಮಕ್ಕಳೊಂದಿಗೆ ಸಕಲೇಶಪುರದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದರು. ಈ ವೇಳೆ ಲಕ್ಷ್ಮೀ ಹಾಗೂ ಮಕ್ಕಳು ಸಂಬಂಧಿಕರ ಜತೆ ಧರ್ಮಸ್ಥಳಕ್ಕೆ ತೆರಳಿ ಭಾನುವಾರ ಸುಬ್ರಹ್ಮಣ್ಯಕ್ಕೆ ಬಂದಿದ್ದರು. ರಾತ್ರಿ ಲಕ್ಷ್ಮೀ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕಡಬದ ಸರಕಾರಿ ಆಸ್ಪತೆಗೆ ಕರೆತರಲಾಗಿದೆ, ಬಳಿಕ ಪುತ್ತೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿದ್ದು ಮಹಿಳೆ ಮೃತಪಟ್ಟರುವುದಾಗಿ ತಿಳಿದುಬಂದಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.