ನ್ಯೂಸ್ ನಾಟೌಟ್: ಕೆವಿಜಿ ಸುಳ್ಯ ಹಬ್ಬದ ಪ್ರಯುಕ್ತ ಡಿ.16ಕ್ಕೆ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ) ಸುಳ್ಯ ವತಿಯಿಂದ ಅಮರಶಿಲ್ಪಿ ದಿವಂಗತ ಕುರುಂಜಿ ವೆಂಕಟರಮಣ ಗೌಡರ 95ನೇ ಹುಟ್ಟುಹಬ್ಬದ ಸಂಭ್ರಮದ ಸವಿನೆನಪಿಗಾಗಿ ಸ್ಮರಣೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಕೆವಿಜಿ ಸಾಧನೆ, ಸಂಸ್ಮರಣೆ, ಶಾಲೆಗಳ ಗ್ರಂಥಾಲಯಕ್ಕೆ ಪುಸ್ತಕ ವಿತರಣೆ ಹಾಗೂ ಸ್ಪರ್ಧೆಗಳು ನಡೆಯಲಿದೆ. ಈ ಬಗ್ಗೆ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪೇರಾಲು, ದಿವಂಗತ ಕುರುಂಜಿ ವೆಂಕಟರಮಣ ಗೌಡರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಬೆಳಗ್ಗೆ 11 ಗಂಟೆಯವರೆಗೆ ಸುಳ್ಯ ತಾಲೂಕಿನ 26 ಶಾಲೆಗಳಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳ ಕಾರ್ಯನಿರ್ದೇಶಕರನ್ನು ನೇಮಕ ಮಾಡಿದ್ದಾರೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಸಮಯಕ್ಕನುಸಾರವಾಗಿ ಕೆವಿಜಿ ಸಾಧನೆ – ಸಂಸ್ಮರಣೆ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದ್ದು ಬಹುಮಾನ ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಕೂಡಾ ಭಾಗವಹಿಸಿ ಕೆ.ವಿ.ಜಿ ಸಂಸ್ಥೆಯ ಮಹತ್ವ ಮತ್ತು ಬೆಳವಣಿಗೆಯಲ್ಲಿ ಸಹಕರಿಸಬೇಕು ಎಂದು ಹೇಳಿದರು. ಕೋಶಾಧಿಕಾರಿ ಜನಾರ್ಧನ ನಾಯ್ಕ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಡಾ. ಜ್ಞಾನೇಶ್ ,ಪ್ರಭಾಕರನ್ ನಾಯರ್, ಚಂದ್ರ ಕೋಲ್ಚಾರ್, ರಾಜು ಪಂಡಿತ್ ಉಪಸ್ಥಿತರಿದ್ದರು.