ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಅವಘಡ..! ರೋಗಿಗಳು ಪಾರಾಗಿದ್ದೇಗೆ? ಮಧ್ಯರಾತ್ರಿಯೇ ಶಾಸಕ ಅಶೋಕ್ ರೈ ಭೇಟಿ!

ನ್ಯೂಸ್ ನಾಟೌಟ್: ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ (ಡಿ.22) ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕು ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಈ ಘಟನೆ ನಡೆದಿದೆ. ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ. ಈ ಸಂದರ್ಭ ಕೆಲ ಯಂತ್ರಗಳಿಗೆ ಹಾನಿಯಾದ ಘಟನೆಯೂ ನಡೆದಿದ್ದು, ರೋಗಿಗಳು ಪಾರಾಗಿದ್ದಾರೆ. ರಾತ್ರಿ 1 ಗಂಟೆ ವೇಳೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಸಂದರ್ಭ ಪಕ್ಕದ ವಿಹಿಂಪ ಕಾರ್ಯಾಲಯದಲ್ಲಿದ್ದ ದತ್ತಮಾಲಾಧಾರಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ ಎನ್ನಲಾಗಿದೆ. ದುರ್ಘಟನೆಯಲ್ಲಿ ಹವಾನಿಯಂತ್ರಿತ ಘಟಕ ಮತ್ತು ಅದರ ಪಕ್ಕದಲ್ಲಿದ್ದ ಇತರ ಕೆಲವೊಂದು ಯಂತ್ರಗಳಿಗೆ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.