- +91 73497 60202
- [email protected]
- October 7, 2024 1:54 AM
ನ್ಯೂಸ್ ನಾಟೌಟ್ : ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ (Allahu Akbar) ಎಂದು ಘೋಷಣೆ ಕೂಗಿದ ಘಟನೆ ವರದಿಯಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ, ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಸಿಹಿ ವಿತರಿಸಿದರು. ಈ ವೇಳೆ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗುತ್ತಿದ್ದರು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ. ನೀವು ಮೋದಿ ಪರ ಕೆಲಸ ಮಾಡ್ತಿದ್ದೀರಾ ಎಂದು ಈ ವೇಳೆ ಪೊಲೀಸರಿಗೆ ಮುಸ್ಲಿಂ ಮಹಿಳೆಯರು ಅವಾಜ್ ಹಾಕಿದ್ದಾರೆ. ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರಿಂದ ಮುಸ್ಲಿಂ ಮಹಿಳೆಯರ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ.ಮುಸ್ಲಿಂ ಮಹಿಳೆ ಬಂಧಿಸುವಂತೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಪೊಲೀಸರನ್ನು ಒತ್ತಾಯಿಸಿದರು. ಮುಸ್ಲಿಂ ಮಹಿಳೆ ನ್ಯೂಸೆನ್ಸ್ ಮಾಡ್ತಿದ್ದರೂ ಸುಮ್ಮನಿದ್ದೀರಾ ಎಂದು ಕಾಂತೇಶ್ ಪೊಲೀಸರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಜೀಪಿನಲ್ಲಿ ಪೊಲೀಸರು ಕರೆದೊಯ್ದರು.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ