ನ್ಯೂಸ್ ನಾಟೌಟ್: ಸಿಎಂ ಸಿದ್ದು ಸರ್ಕಾರ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ಫೋನ್ ನೀಡಲು ನಿರ್ಧರಿಸಿದೆ.ಈಗಾಗ್ಲೇ ಸಿದ್ದು ಸರ್ಕಾರ ಘೋಷಣೆ ಮಾಡಿದ್ದ ಐದು ಗ್ಯಾರಂಟಿಗಳು ಜನರ ಮನ ಗೆದ್ದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಸ್ಮಾರ್ಟ್ ಫೋನ್ ನೀಡಲು ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪೋಷಣ್ ಅಭಿಯಾನ ಯೋಜನೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಫಲಾನುಭವಿಗಳ ಗುರಿಯನ್ನಾಧರಿಸಿ ಈ ನಿರ್ಧಾರ ತೆಗೆದು ಕೊಳ್ಳಲಾಗಿದೆ. ಎಲ್ಲಾ ಪೌಷ್ಟಿಕತೆಯ ಯೋಜನೆಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಟಿಕತೆಯ ಸ್ಥಿತಿಯನ್ನು ನಿರ್ದಿಷ್ಟ ಅವಧಿಗೆ ಅನುಗುಣವಾಗಿ ಸುಧಾರಿಸುವುದೇ ಇದರ ಗುರಿಯಾಗಿದೆ.ಮಾತ್ರವಲ್ಲ ಅವರ ಸುಧಾರಣೆಯ ಚಟುವಟಿಕೆಗಳನ್ನು ಕೈಗೊಂಡ ಮಾಹಿತಿಯನ್ನು ಪೋಷ್ ಟ್ರ್ಯಾಕರ್ನಲ್ಲಿ ಅಳವಡಿಸಲು ಸ್ಮಾರ್ಟ್ ಫೋನ್ ಖರೀದಿಸಲಾಗುತ್ತಿದೆ ಎಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ.ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.