ನ್ಯೂಸ್ ನಾಟೌಟ್: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲೊಂದಾದ ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ದಾಳಿ ಮಾಡಿದೆ. ಕುಶಾಲನಗರ ವಾಲ್ನೂರು ತ್ಯಾಗತ್ತೂರು ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರಿನ ಹಿಂಬಂದಿ ಜಖಂಗೊಂಡಿದೆ.
ಪ್ರವಾಸಿಗರು ಮಡಿಕೇರಿಯಿಂದ ಚಟ್ಟಳ್ಳಿ ಮೂಲಕ ದುಬಾರೆಗೆ ಕಾರಿನಲ್ಲಿ ತೆರಳುತ್ತಿದ್ದರು. ಇದೇ ಸಂದರ್ಭದಲ್ಲಿ ಕಾಡಾನೆ ಮುಗಿ ಬಿದ್ದಿದೆ ಎನ್ನಲಾಗಿದೆ. ಇದೀಗ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಮದವೇರಿದ ಆನೆಯನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.