ನ್ಯೂಸ್ ನಾಟೌಟ್: ಸುಳ್ಯದಲ್ಲಿ ನಿರ್ಮಾಣವಾಗಬೇಕಿದ್ದ ಅಂಬೇಡ್ಕರ್ ಭವನದ ಕಾಮಗಾರಿಗೆ ಗ್ರಹಣ ಹಿಡಿದಿದೆ. ಅನುದಾನ ಕೊರತೆಯಿಂದಾಗಿ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಕಟ್ಟಡದ ಸುತ್ತ ಗಿಡಗಂಟಿಗಳು ಬೆಳೆದಿದ್ದು, ಪಿಲ್ಲರ್ ನ ಕಬ್ಬಿಣಕ್ಕೆ ತುಕ್ಕು ಹಿಡಿದಿದೆ.
ಈ ಪ್ರದೇಶ ಬಹುತೇಕ ಪಾಳು ಬಿದ್ದಂತೆ ಇದ್ದು, ಕಾಮಗಾರಿ ವಿಳಂಬವಾದ್ದರಿಂದ ಯೋಜನೆಯ ಮೊತ್ತ ದುಪ್ಪಟ್ಟಾಗಲಿದೆ ಎನ್ನಲಾಗಿದೆ. ಕಾಮಗಾರಿ ಆರಂಭವಾದ ವೇಗಕ್ಕೆ ಸರ್ಕಾರದಿಂದ ಬಿಡುಗಡೆಯಾಗಬೇಕಿದ್ದ ಅನುದಾನ ಸಮಯಕ್ಕೆ ಸರಿಯಾಗಿ ಬಾರದೇ ಇದ್ದುದರಿಂದ ಅಂಬೇಡ್ಕರ್ ಭವನ ಕನಸು ನನಸಾಗಿಯೇ ಉಳಿದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಮುದಾಯದ ಮಂದಿ ಆಗ್ರಹಿಸಿದ್ದಾರೆ.