ನ್ಯೂಸ್ ನಾಟೌಟ್: ನಿರ್ಲಕ್ಷ್ಯದ ಚಾಲನೆಯಿಂದಾಗಿ ನಾಲ್ಕು ವರ್ಷದ ಬಾಲಕ ಬಲಿಯಾದ ಘಟನೆ ಬೆಂಗಳೂರಿನ ಜೈ ಭೀಮಾನಗರದ ಮುರಗೇಶ್ ಪಾಳ್ಯದಲ್ಲಿ ಭಾನುವಾರ(ಮೇ.12) ನಡೆದಿದೆ. ಹಳೆಯ ಏರ್ಪೋರ್ಟ್ ರಸ್ತೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಘಟನೆ ನಡೆದಿದ್ದು, ಆರವ್ (4) ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದ ವರದಿ ತಿಳಿಸಿದೆ.
ಮೃತ ಆರವ್ ಮನೆ ಮುಂದೆಯ ರಸ್ತೆಯಲ್ಲಿ ಆಟವಾಡುತ್ತಿದ್ದ ಸಂದರ್ಭ ರ್ಯಾಶ್ ಡ್ರೈವಿಂಗ್ ಮಾಡಿಕೊಂಡ ಬಂದ ಚಾಲಕ ಬಾಲಕನಿಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನು ರ್ಯಾಶ್ ಡ್ರೈವಿಂಗ್ ಮಾಡಿದ ಕಾರು ಚಾಲಕನನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ.ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕನ ದೇಹ ಛಿದ್ರವಾಗಿದೆ. ಸದ್ಯ ಬಾಲಕನ ಮೃತದೇಹವನ್ನು ಮಣಿಪಲ್ ಆಸ್ಪತ್ರೆಗೆ ರವಾನಿಸಲಾಗಿದೆ.
Click 👇