ನ್ಯೂಸ್ ನಾಟೌಟ್: ಇವಿಎಂ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ಚಾಮರಾಜನಗರ ಜಿಲ್ಲಾಡಳಿತ ನಾಡಿಗೆ ಕರೆತಂದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ನಡೆದಿದೆ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಮಾತ್ರ ಕ್ರಮ ಕೈಗೊಳ್ಳಲಾಗುವುದು. ಉಳಿದವರು ಹೆದರುವ ಅವಶ್ಯಕತೆ ಇಲ್ಲ. ನಿರ್ಭೀತಿಯಿಂದ ಇರಬಹುದು ಎಂದು ಗ್ರಾಮಸ್ಥರಿಗೆ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್ಪಿ ಧರ್ಮೇಂದ್ರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಭಯ ಧೈರ್ಯ ತುಂಬಿದಿದ್ದಾರೆ.
ಬಂಧನದ ಭಯದಿಂದ ಗ್ರಾಮಸ್ಥರು ಊರು ಖಾಲಿ ಮಾಡಿದ್ದರು. ಹೀಗಾಗಿ ಗ್ರಾಮದಲ್ಲಿ ವೃದ್ದರು, ಚಿಕ್ಕ ಮಕ್ಕಳು ಜಾನುವಾರುಗಳಿಗೆ ಆರೈಕೆ ಇಲ್ಲದೆ ಪರದಾಡಿದ್ದು, ಮೇವು ನೀರು ಕೊಡುವವರು ಇಲ್ಲದೆ ಎರಡು ಎಮ್ಮೆಗಳು ಅಸುನೀ*ಗಿದ್ದವು. ಹೀಗಾಗಿ ಇದನ್ನು ಮನಗಂಡು ಕಾಡಿನಲ್ಲಿ ಅವಿತಿದ್ದ ಗ್ರಾಮಸ್ಥರನ್ನು ಪತ್ತೆ ಹಚ್ಚಿ ಊರಿಗೆ ಕರೆತರಲಾಗಿದೆ. ಸೂಕ್ತ ಮೂಲಭೂತ ಸೌಕರ್ಯ ನೀಡುವಂತೆ ಪ್ರತಿಭಟನೆ ನಡೆಸಿ ಮತದಾನ ಬಹಿಷ್ಕರಿಸಿದ್ದ ಮತದಾರರ ಮನವೊಲಿಸಿ ಮತದಾನಕ್ಕೆ ಕರೆ ತಂದ ವೇಳೆ ಭಾರಿ ಗಲ*ಭೆ ಉಂಟಾಗಿತ್ತು. ಇಂಡಿಗನತ್ತ ಮತಗಟ್ಟೆ 146 ರ ಒಳ ನುಗ್ಗಿದ ಪ್ರತಿಭಟನಾಕಾರರು ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಮತಗಟ್ಟೆ ಹಾಗೂ ಇವಿಎಂ ಮಷಿನ್ ಧ್ವಂಸ ಗೊಳಿಸಿದ್ದರು.
ಗಲ*ಭೆ ಪ್ರಕರಣದ ಹಿನ್ನಲೆ 33 ಮಂದಿ ಪೊಲೀಸರು ಬಂಧಿಸಿದ್ದಾರೆ. 250 ಕ್ಕೂ ಹೆಚ್ಚು ಮಂದಿಯ ಮೇಲೆ ಎಫ್ಐ ಆರ್ ದಾಖಲಾಗಿದೆ ಎನ್ನಲಾಗಿದೆ. ಇತ್ತ ಎಫ್ಐಆರ್ ದಾಖಲಾಗುತ್ತಿದ್ದಂತೆ ಗ್ರಾಮದಲ್ಲಿದ್ದವರು ಪರಾರಿಯಾಗಿದ್ದು ಕೇವಲ ಮಂದಾರೆ ಹಾಡಿಯ 71 ಮಂದಿಯಷ್ಟೇ ಮತದಾನ ಮಾಡಿದ್ದರು ಎನ್ನಲಾಗಿದೆ. ಈಗ ಅಧಿಕಾರಿಗಳು ಮನವೊಲಿಸಿ ಜನರನ್ನು ಕರೆತಂದಿದ್ದಾರೆ.