- +91 73497 60202
- [email protected]
- October 6, 2024 8:24 PM
ನ್ಯೂಸ್ ನಾಟೌಟ್: ಪ್ರೇಮಿಯೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ನಾನು ರೈಲಿನಡಿ ಬಿದ್ದು ಸಾಯುತ್ತೇನೆ ಎಂದು ಪ್ರಿಯಕರನನ್ನು ಹೆದರಿಸಲು ಹೋಗಿ, ನಿಜವಾಗಲು ಆಕಸ್ಮಿಕವಾಗಿ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿನ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ನಡೆದಿದ್ದು, ಗೆಳೆಯನೊಂದಿದೆ ಜಗಳವಾಡಿದ ಮಹಿಳೆಯೊಬ್ಬರು, ಸಿಟ್ಟಿನಿಂದ ರೈಲ್ವೆ ಹಳಿಗೆ ಹಾರಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು ಲೋಹಾ ಮಂಡಿಯ ಭಾರತಿ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಭಾರತಿ ಎಂಬವರಿಗೆ ಪೂನಂ ಮತ್ತು ಕೃಷ್ಣ ಎಂಬ ಇಬ್ಬರು ಮಕ್ಕಳಿದ್ದು, ಕೆಲ ವರ್ಷಗಳ ಹಿಂದೆ ಆಕೆಯ ಪತಿ ಧರ್ಮೇಂದ ಮೃತಪಟ್ಟಿದ್ದರು. ಕಳೆದ ಎರಡು ವರ್ಷಗಳಿಂದ ಭಾರತಿ ತನ್ನ ಪ್ರೇಮಿ ಕಿಶೋರ್ ಜೊತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದರು. ಕುಡಿತದ ವಿಷಯದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಆಕೆ ರೈಲ್ವೆ ನಿಲ್ದಾಣದ ಬಳಿ ಬಂದು ತಾನು ಸಾಯುವುದಾಗಿ ಪ್ರಿಯಕರನನ್ನು ಹೆದರಿಸುತ್ತಾರೆ. ನಂತರ ರೈಲ್ವೆ ಹಳಿಯ ಮೇಲೆ ಜಿಗಿಯಲು ಹೋಗಿದ್ದು, ಆಕಸ್ಮಿಕವಾಗಿ ಬಿದ್ದಿದ್ದಾರೆ. ಅಷ್ಟರಲ್ಲಿ ವೇಗವಾಗಿ ಬಂದ ಕೇರಳ ಎಕ್ಸ್ಪ್ರೆಸ್ ರೈಲು ಆಕೆಗೆ ಡಿಕ್ಕಿ ಹೊಡೆದಿದೆ, ಈ ವೇಳೆ ಪ್ರೇಮಿ ಅಲ್ಲಿಂದ ಓಡಿದ್ದಾನೆ. ಈ ಕುರಿತ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ