- +91 73497 60202
- [email protected]
- July 9, 2024 4:58 AM
ನ್ಯೂಸ್ ನಾಟೌಟ್ : ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಅನೇಕರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ಎಲ್ಲಾ ಆರೋಪಿಗಳನ್ನೂ ಇಂದು(ಜೂ.20) ಸಂಜೆ ಕೋರ್ಟ್ ಗೆ ಹಾಜರು ಪಡಿಸಿದ್ದು, ವಿಚಾರಣೆ ಮುಕ್ತಾಯವಾಗಿದೆ. ದರ್ಶನ್ ಸೇರಿದಂತೆ 4 ಪ್ರಮುಖ ಆರೋಪಿಗಳನ್ನು (ವಿನಯ್, ದನರಾಜ್, ಪ್ರದೋಷ್) ಮತ್ತೆ ಕೋರ್ಟ್ ಅನುಮತಿಯ ಮೇರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದರ್ಶನ್ ಸೇರಿದಂತೆ 6 ಜನರನ್ನು ಮತ್ತೆ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಈಗಾಗಲೇ ಹಲವು ಸುತ್ತಿನ ವಿಚಾರಣೆ ನಡೆಸಲಾಗಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಈ ಮೂಲಕ ನೂರಾರು ಬಗೆಯ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಜೂನ್ 19 ರಂದು ದರ್ಶನ್(Darshan) ಮತ್ತು ಪವಿತ್ರಾ ಗೌಡ ಮತ್ತು ಇತರ ಆರೋಪಿಗಳ ಡಿಎನ್ಎ ಟೆಸ್ಟ್ (DNA Test) ಮಾಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಡಿಎನ್ಎ ಪರೀಕ್ಷೆ ಮಾಡಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ