ನಟ ದರ್ಶನ್ ಸೇರಿ ಪ್ರಮುಖ 4 ಆರೋಪಿಗಳು ಮತ್ತೆ ಪೊಲೀಸ್ ಕಸ್ಟಡಿಗೆ..! 2 ದಿನಗಳ ಕಾಲಾವಕಾಶ ನೀಡಿದ ಕೋರ್ಟ್, 10 ಆರೋಪಿಗಳು ಜೈಲಿಗೆ

ನ್ಯೂಸ್ ನಾಟೌಟ್ : ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ ಅನೇಕರಿಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ಎಲ್ಲಾ ಆರೋಪಿಗಳನ್ನೂ ಇಂದು(ಜೂ.20) ಸಂಜೆ ಕೋರ್ಟ್ ಗೆ ಹಾಜರು ಪಡಿಸಿದ್ದು, ವಿಚಾರಣೆ ಮುಕ್ತಾಯವಾಗಿದೆ. ದರ್ಶನ್ ಸೇರಿದಂತೆ 4 ಪ್ರಮುಖ ಆರೋಪಿಗಳನ್ನು (ವಿನಯ್, ದನರಾಜ್, ಪ್ರದೋಷ್) ಮತ್ತೆ ಕೋರ್ಟ್ ಅನುಮತಿಯ ಮೇರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. 10 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದರ್ಶನ್ ಸೇರಿದಂತೆ 6 ಜನರನ್ನು ಮತ್ತೆ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಈಗಾಗಲೇ ಹಲವು ಸುತ್ತಿನ ವಿಚಾರಣೆ ನಡೆಸಲಾಗಿದೆ. ವಿವಿಧ ಸ್ಥಳಗಳಲ್ಲಿ ಮಹಜರು ಮಾಡಲಾಗಿದೆ. ಈ ಮೂಲಕ ನೂರಾರು ಬಗೆಯ ಸಾಕ್ಷ್ಯಗಳನ್ನು ಕಲೆ ಹಾಕಲಾಗಿದೆ. ಜೂನ್​ 19 ರಂದು ದರ್ಶನ್(Darshan) ಮತ್ತು ಪವಿತ್ರಾ ಗೌಡ ಮತ್ತು ಇತರ ಆರೋಪಿಗಳ ಡಿಎನ್​ಎ ಟೆಸ್ಟ್​ (DNA Test) ಮಾಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದರ್ಶನ್​, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ ಮಾಡಲಾಗಿದೆ. Click 👇