ದರ್ಶನ್ ಪ್ರಕರಣ: ಗೌತಮ್ ಹೆಸ್ರಲ್ಲಿ ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸ್ತಿದ್ದ ಎಂದ ಮಾಜಿ ಬಿಗ್‌ಬಾಸ್ ಸ್ಪರ್ಧಿ..! ಚಿತ್ರಾಲ್ ರಂಗಸ್ವಾಮಿ ಈ ಬಗ್ಗೆ ವಿವರಿಸಿದ್ದೇನು..?

ನ್ಯೂಸ್‌ ನಾಟೌಟ್‌: ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಕಾರಣಕ್ಕೆ ದರ್ಶನ್ ಆ್ಯಂಡ್ ಗ್ಯಾಂಗ್ ಪ್ರಕರಣದಲ್ಲಿ ಮೃತನಾದ ರೇಣುಕಾಸ್ವಾಮಿ ಬಗ್ಗೆ ಕನ್ನಡ ಬಿಗ್ ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಹೊಸ ಸ್ಪೋಟಕ ಮಾಹಿತಿಯನ್ನು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಕೊಲೆ ವಿಚಾರಕ್ಕೆ (Actor Darshan) ಸಂಬಂಧಪಟ್ಟಂತೆ ದರ್ಶನ್‌ 14 ದಿನ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ (Chitral Rangaswamy) ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೊ ಶೇರ್‌ ಮಾಡಿ, ರೇಣುಕಾಸ್ವಾಮಿಯ ಫೇಕ್ ಅಕೌಂಟ್‌ ನ ಸ್ರೀನ್ ಶಾಟ್ ಅನ್ನು ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ‌ʻʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ. ಹಾಗಾಗಿ ಹಾಕಲಿಲ್ಲ. ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು. ಬೇಸರ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ” ಎಂದು ಚಿತ್ರಾಲ್ ವಿವರಿಸಿದ್ದಾರೆ. Click 👇