Darshan Thoogudeepa: ದರ್ಶನ್‌ ಪ್ರಕರಣ: ಕಾನೂನಿಗಿಂತ ಯಾರು ದೊಡ್ಡವರಲ್ಲ ಎಂದ ದರ್ಶನ್ ಆಪ್ತ ವಿನೋದ್‌ ಪ್ರಭಾಕರ್..! ದಾಸನನ್ನು ಜೈಲಿನಲ್ಲಿ ಭೇಟಿಯಾದ ಗೆಳೆಯ..!

ನ್ಯೂಸ್‌ ನಾಟೌಟ್‌: ಕನ್ನಡದ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದಾರೆ. ಈ ಹಿಂದೆ ಇಡೀ ವಿಶ್ವವನ್ನೇ ಎದುರಿಸಿ ನಿಲ್ತೇನೆ ಕೇವಲ ಡಿ ಬಾಸ್ ಗಾಗಿ ಎಂದಿದ್ದ ವಿನೋದ್ ಪ್ರಭಾಕರ್ ಈಗ ಎಲ್ಲಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಇದೀಗ ಅವರನ್ನು ನಟ ವಿನೋದ್ ಪ್ರಭಾಕರ್ ಭೇಟಿಯಾಗಿ ಮಾತನಾಡಿಸಿ ಬಂದಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕಾನೂನಿಗಿಂತ ಯಾರು ದೊಡ್ಡವರಿಲ್ಲ, ನ್ಯಾಯ ಸಿಗಬೇಕು ಎಂದು ವಿನೋದ್ ಹೇಳಿದ್ದಾರೆ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಬೇಕು. ಅವರ ಕುಟುಂಬಕ್ಕೆ ಭಗವಂತ ಧೈರ್ಯ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ. ಹೀಗೆಲ್ಲಾ ಆಗಬಾರದಿತ್ತು. ನಿಮಗೆಲ್ಲಾ ಎಷ್ಟು ತಿಳಿದಿದೆಯೋ ನನಗೂ ಅಷ್ಟೇ ತಿಳಿದಿರೋದು. ನಾನು ದರ್ಶನ್ ಸರ್ ಅವರನ್ನು ಮೀಟ್ ಮಾಡದೇ 4 ತಿಂಗಳು ಆಗಿತ್ತು. ಅವರ ಹುಟ್ಟುಹಬ್ಬಕ್ಕೆ ಮೀಟ್ ಆಗಿದ್ದು ಆ ನಂತರ ಸುದ್ದಿ ನೋಡಿ ತಿಳಿಯಿತು ಎಂದು ದರ್ಶನ್ ಆಪ್ತ ನಟ ವಿನೋದ್ ಪ್ರಭಾಕರ್ ಮಾತನಾಡಿದ್ದಾರೆ. ಅನ್ನಪೂರ್ಣೇಶ್ವರಿ ಠಾಣೆಯಲ್ಲಿದ್ದಾಗ ಭೇಟಿ ಮಾಡಲು ಪ್ರಯತ್ನಿಸಿದೆ ಆದರೆ ಅಂದು ಆಗಲಿಲ್ಲ. ಇದೀಗ ಅವರನ್ನು ಭೇಟಿಯಾಗಿದ್ದೇನೆ ಎಂದಿದ್ದಾರೆ. ಅಲ್ಲಿ ಏನೂ ಮಾತನಾಡಲು ಸಾಧ್ಯವಾಗಲಿಲ್ಲ. ಹ್ಯಾಂಡ್ ಶೇಕ್ ಮಾಡ್ವಿ. ಟೈಗರ್ ಅಂದ್ರು ಬಾಸ್ ಅಂತ ಕರೆದೆ ಅಷ್ಟೇ ಎಂದಿದ್ದಾರೆ. Click 👇