- +91 73497 60202
- [email protected]
- October 6, 2024 11:08 PM
ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ವಿಚಾರಣಾಧೀನ ಕೈದಿಯಾಗಿ 14 ದಿನಗಳ ನ್ಯಾಯಾಂಗ ಬಂಧನ ನೀಡಲಾಗಿದೆ. ಪರಪ್ಪನ ಅಗ್ರಹಾರಕ್ಕೆ ಅವರನ್ನು ನೋಡಬೇಕು ಎಂದು ಕೆಲವು ಅಭಿಮಾನಿಗಳು ಜೈಲಿನ ಬಳಿ ಬಂದಿದ್ದಾರೆ. ದೂರದ ರಾಯಚೂರು ಜಿಲ್ಲೆಯಿಂದ ಬಂದಿರುವ ಫ್ಯಾನ್ಸ್ ಅಧಿಕಾರಿಗಳು ಅನುಮತಿ ನಿರಾಕರಿಸಿದ ಕಾರಣ ಕಣ್ಣೀರು ಹಾಕುತ್ತಾ ಜೈಲಿನ ಹೊರಗೆ ನಿಂತಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಬೇಕು ಎಂದು ಅಭಿಮಾನಿಗಳು ಹಠ ಹಿಡಿದಿದ್ದಾರೆ. ದೂರದ ಊರುಗಳಿಂದ ಬಂದಿರುವ ದರ್ಶನ್ ಅಭಿಮಾನಿಗಳು ತಮ್ಮ ಎದೆಯ ಮೇಲೆ ದರ್ಶನ್ ಭಾವಚಿತ್ರದ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ‘ನಮ್ಮ ಬಾಸ್ ಕೆಟ್ಟದ್ದು ಮಾಡಿರಬಹುದು. ಆದರೆ ಅವರು ಸಾಕಷ್ಟು ಸಮಾಜ ಸೇವೆ ಮಾಡಿದ್ದಾರೆ. ಆದರೂ ಮಾಧ್ಯಮಗಳಲ್ಲಿ ಕೆಟ್ಟದಾಗಿ ತೋರಿಸಲಾಗುತ್ತಿದೆ’ ಎಂದು ದರ್ಶನ್ ಅಭಿಮಾನಿಗಳು ಹೇಳುತ್ತಿದ್ದಾರೆ. ‘ಇಂದು ರಜೆ ಹಿನ್ನೆಲೆಯಲ್ಲಿ ಬಾಸ್ ಭೇಟಿಗೆ ಅವಕಾಶ ನೀಡುತ್ತಿಲ್ಲ. ನಾವು ನಾಳೆ ಬಾಸ್ ಭೇಟಿ ಮಾಡಿಯೇ ವಾಪಸ್ ಹೊರಡೋದು’ ಎಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ದರ್ಶನ್ ಅಭಿಮಾನಿಗಳ ಹೇಳುತ್ತಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ