- +91 73497 60202
- [email protected]
- July 3, 2024 2:00 PM
ಪುತ್ತೂರಿನ ಪ್ರವಾಸಿಗರ ಮೇಲೆ ಕೊಡಗಿನಲ್ಲಿ ಹಲ್ಲೆ..! ಚಿನ್ನ ಎಗರಿಸಿ ಪರಾರಿ..! ವಿಡಿಯೋ ವೀಕ್ಷಿಸಿ
ನ್ಯೂಸ್ ನಾಟೌಟ್: ಕೊಡಗಿನ ಕೋಟೆಬೆಟ್ಟ (Kotebetta) ಪ್ರವಾಸಕ್ಕೆಂದು ಆಗಮಿಸಿದ ಪ್ರವಾಸಿಗರ ಮೇಲೆ ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಭಾನುವಾರ(ಜೂ.23) ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಪುತ್ತೂರಿನಿಂದ ಕುಟುಂಬವೊಂದು ಕೋಟೆಬೆಟ್ಟ ಪ್ರವಾಸಿ ತಾಣಕ್ಕೆ ಆಗಮಿಸಿದ ಸಂದರ್ಭ ಬೈಕಿನಲ್ಲಿ ಬಂದ ಇಬ್ಬರು ಪುಂಡರು ಹಲ್ಲೆ ನಡೆಸಿ, ಚಿನ್ನದ ಸರ ಎಗರಿಸಿ ಬೈಕನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಇಬ್ಬರು ಆರೋಪಿಗಳು ಮಾದಾಪುರ ಸಮೀಪದ ನಿವಾಸಿಗಳು ಎಂಬ ವಿಚಾರ ತಿಳಿದು ಬಂದಿದೆ. ದೌರ್ಜನ್ಯಕ್ಕೆ ಒಳಗಾದವರು ಮಾದಾಪುರ ಉಪ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ