ಮಂಗಳೂರು: ಶ್ರೀ ಜಾರಂದಾಯ ದೈವಸ್ಥಾನಕ್ಕೆ ಬಡಿದ ಸಿಡಿಲು..! ರಾತ್ರಿ ಸುರಿದ ಮಳೆಗೆ ಅನಾಹುತ..!

ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ತಡರಾತ್ರಿ ಸುರಿದ ಭಾರೀ ಮಳೆಯ ವೇಳೆ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. Click 👇