ನ್ಯೂಸ್ ನಾಟೌಟ್: ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದೆ. ಇದೀಗ ಬಿಸಿಲೇಘಾಟ್ ಸಮೀಪದ ಸಕಲೇಶಪುರ ತಾಲೂಕು ವ್ಯಾಪ್ತಿಯ ಪ್ರವಾಸಿ ತಾಣವಾಗಿರುವ ಪಟ್ಲಬೆಟ್ಟಕ್ಕೆ ಹೊರಟ ಮಂಗಳೂರಿನ ತಂಡದ ಮೇಲೆ ಹಲ್ಲೆ ನಡೆದಿದೆ ಅನ್ನುವ ಆರೋಪ ಕೇಳಿ ಬಂದಿದೆ. ಈ ಬಗೆಗಿನ ವಿಡಿಯೋವೊಂದು ವೈರಲ್ ಆಗುತ್ತಿದೆ.
ಹಲ್ಲೆಗೊಳಗಾದ ಯುವಕನೊಬ್ಬ ಇದೀಗ ಯಲಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಯಾವ ಕಾರಣಕ್ಕೆ ಜಗಳ ನಡೆದಿದೆ ಅನ್ನೋದು ಇನ್ನೂ ಖಚಿತಗೊಂಡಿಲ್ಲ. ಬೈಕ್ ನಲ್ಲಿ ಬಂದಿರುವ ತಂಡದ ಜೊತೆ ಅಲ್ಲಿದ್ದ ವ್ಯಕ್ತಿಗಳು ಬೈಕ್ ನಲ್ಲಿ ತೆರಳಬೇಡಿ ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.