ಉಳ್ಳಾಲದಲ್ಲಿ ನೇಪಾಳ ಮೂಲದ 16ರ ಬಾಲಕಿ ನಿಗೂಢ ಆತ್ಮಹತ್ಯೆ..! ಶೌಚಾಲಯದ ಕಬ್ಬಿಣದ ಸಲಾಕೆಗೆ ನೇಣು ಬಿಗಿದುಕೊಂಡ 8ನೇ ತರಗತಿ ಬಾಲಕಿ ..!

ನ್ಯೂಸ್ ನಾಟೌಟ್: ನೇಪಾಳ ಮೂಲದ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದ ತೊಕ್ಕೊಟ್ಟು, ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಶನಿವಾರ(ಜೂ.9) ನಡೆದಿದೆ. ನೇಪಾಳ ಮೂಲದ ರಬೀನ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ತೊಕ್ಕೊಟ್ಟಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ಚೆಂಬುಗುಡ್ಡೆಯಲ್ಲಿ ಬಾಡಿಗೆಗೆ ನೆಲೆಸಿದ್ದರು. ರಾಮ್ ಶರಣ್ ಅವರ ಎರಡನೇ ಮಗಳಾದ ರಬೀನ ನೇಪಾಳದಲ್ಲಿ ಎಂಟನೇ ತರಗತಿ ಓದುತ್ತಿದ್ದು, ಆಕೆಯನ್ನು ಮಂಗಳೂರಲ್ಲೇ ಓದಿಸುವ ಸಲುವಾಗಿ ತಿಂಗಳ ಹಿಂದೆ ಪೋಷಕರು ತೊಕ್ಕೊಟ್ಟಿಗೆ ಕರೆ ತಂದಿದ್ದರು ಎನ್ನಲಾಗಿದೆ. ಆದರೆ ರಬೀನ ತಾನು ನೇಪಾಳದಲ್ಲೇ ಓದು ಮುಂದುವರಿಸೋದಾಗಿ ಹಠ ಹಿಡಿದಿದ್ದಳು ಎನ್ನಲಾಗಿದೆ. ಶನಿವಾರ ಮದ್ಯಾಹ್ನದ ವೇಳೆ ರಬೀನಳ ತಾಯಿ‌ ರಮೀಲ ಚಿಕ್ಕ ಮಕ್ಕಳನ್ನ ಶಾಲೆಯಿಂದ ಮನೆಗೆ ಕರಕೊಂಡು ಹೋಗಿದ್ದ ವೇಳೆ ರಬೀನ ಮನೆಯ ಶೌಚಾಲಯದ ಕಬ್ಬಿಣದ ಸಲಾಕೆಗೆ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. Click 👇