ಮಾರಕಾಸ್ತ್ರಗಳಿಂದ ಸ್ವಾಮೀಜಿಯನ್ನು ಕೊಚ್ಚಿ ಕೊಂದ ಆಪ್ತ ಸಹಾಯಕ..! ಆರೋಪಿ ಅರೆಸ್ಟ್, ಇಲ್ಲಿದೆ ಮಠದ ಸಂಪೂರ್ಣ ಕಹಾನಿ..!

ನ್ಯೂಸ್‌ ನಾಟೌಟ್‌: ಮಾರಕಾಸ್ತ್ರಗಳಿಂದ ಕೊಚ್ಚಿ ಸ್ವಾಮೀಜಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದಲ್ಲಿ ನಡೆದಿದೆ. ಈ ಮಠದ 90 ವರ್ಷದ ಶಿವಾನಂದ ಸ್ವಾಮೀಜಿ ಕೊಲೆಯಾದವರು ಎಂದು ಗುರುತಿಸಲಾಗಿದೆ. ಸ್ವಾಮೀಜಿ ಆಪ್ತ ಸಹಾಯಕ ರವಿ(60) ಎಂಬಾತನಿಂದ ಕೃತ್ಯ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿವಾನಂದ ಸ್ವಾಮೀಜಿಗಳ ಆಪ್ತ ಸಹಾಯಕನಾಗಿದ್ದ ರವಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳಾಗಿದ್ದವು. ಮತ್ತೊಂದೆಡೆ ಶಿವಾನಂದ ಸ್ವಾಮೀಜಿಯವರು ನಿವೇಶನ ಮಾಡಿ ಸಂಬಂಧಿಕರಿಗೆ ಹಂಚಿದ್ದ ಆರೋಪವಿತ್ತು. 2011ರಲ್ಲಿ ಸ್ವಾಮೀಜಿ ವಿರುದ್ದ ಪ್ರಕರಣ ದಾಖಲಾಗಿತ್ತು ಎಂದು ವರದಿ ತಿಳಿಸಿದೆ. Click 👇