- +91 73497 60202
- [email protected]
- September 29, 2024 6:49 AM
ನ್ಯೂಸ್ ನಾಟೌಟ್: ಚಿಕ್ಕಮ್ಮನ ಮನೆಯಲ್ಲೇ ಆಸರೆ ಪಡೆದಿದ್ದ ಬಾಲಕ ಆಕೆಯ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿ, ವಿರೋಧಿಸಿದ್ದಕ್ಕೆ ಕೊಲೆ ಮಾಡಿದ ಆರೋಪದ ಮೇಲೆ SSLC ವಿದ್ಯಾರ್ಥಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಹೇಮಾವತಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬಿಳಿಯೂರು ಬಳಿ ಘಟನೆ ನಡೆದಿದೆ. ಜೂ.16ರಂದು ಬಿಳಿಯೂರಿನ ಮನೆಯಲ್ಲಿ ಮೃತದೇಹ ಪತ್ತೆಯಾಗಿದೆ.ಎಸ್ಎಸ್ಎಲ್ಸಿ ಓದುತ್ತಿದ್ದ ಅಕ್ಕನ ಮಗನನ್ನು ಹೇಮಾವತಿ ಮನೆಯಲ್ಲಿ ಇರಿಸಿಕೊಂಡಿದ್ದಾರೆ. ಎಂದಿನಂತೆ ಹೇಮಾವತಿ ಊಟ ಮುಗಿಸಿ ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದಾರೆ. ತಡರಾತ್ರಿ ಆಗುತ್ತಿದ್ದಂತೆ ಬಾಲಕ ಚಿಕ್ಕಮ್ಮನ ಮೇಲೆ ಅತ್ಯಾಚಾರ ಮಾಡಲು ಮುಂದಾಗಿದ್ದಾನೆ. ಈ ವೇಳೆ ವಿರೋಧಿಸಿ ಕೆನ್ನೆಗೆ ಒಂದು ಬಾರಿಸಿ ಕಳಿಸಿದ್ದಾಳೆ. ಬೆಳಗಾದರೆ ತನ್ನ ಬಗ್ಗೆ ಚಿಕ್ಕಮ್ಮ ಎಲ್ಲರೆದುರು ಅತ್ಯಾಚಾರ ಯತ್ನದ ಬಗ್ಗೆ ಹೇಳಿ ಮರ್ಯಾದೆ ಕಳೆಯುತ್ತಾಳೆ ಎಂದು ಹೆದರಿಕೊಂಡು ರಾತ್ರಿ ಮಲಗಿದ್ದ ಚಿಕ್ಕಮ್ಮನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬೆಳಗ್ಗೆ ಎಷ್ಟೇ ಹೊತ್ತಾದರೂ ಹೇಮಾವತಿ ಹಾಸಿಗೆಯಿಂದ ಎದ್ದೇಳದ ಹಿನ್ನೆಲೆಯಲ್ಲಿ ಮನೆಯವರು ಎಬ್ಬಿಸಲು ಮುಂದಾಗಿದ್ದಾರೆ. ಆಗ ಹಾಸಿಗೆಯಲ್ಲಿಯೇ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಬಾಲಕ ಚಿಕ್ಕಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ಮನೆಯವರನ್ನು ನಂಬಿಸಿದ್ದಾನೆ. ಪೊಲೀಸರು ಮಹಿಳೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮರಣೋತ್ತರ ಪರೀಕ್ಷೆಗೆ ಶವ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ವೇಳೆ ಕತ್ತು ಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನು ಆಧರಿಸಿ ಕೊಲೆಯ ಘಟನೆಯನ್ನು ಬೇಧಿಸಿದಾಗ ಮನೆಯಲ್ಲಿದ್ದ ಅಕ್ಕನ ಮಗನೇ ಅತ್ಯಾಚಾರಕ್ಕೆ ಯತ್ನಿಸಿ ವಿರೋಧಿಸಿದಾಗ ಕೊಲೆ ಮಾಡಿದ್ದಾನೆ ಎಂಬುದು ತಿಳಿದುಬಂದಿದೆ. ಆತನನ್ನು ಬಂಧಿಸಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ