ಅಂಕೋಲಾ ಗುಡ್ಡ ಕುಸಿತ ಪ್ರಕರಣ: ಓರ್ವ ಮಹಿಳೆಯ ಮೃತದೇಹ ಪತ್ತೆ..! ಸಾವಿನ ಸಂಖ್ಯೆ 8ಕ್ಕೆ ಏರಿಕೆ..!

ನ್ಯೂಸ್ ನಾಟೌಟ್: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಮಂಗಳವಾರ ಮುಂಜಾನೆ ಗಂಗಾವಳಿ ನದಿ ಸಂಗಮದ ಮಂಜುಗುಣಿಯಲ್ಲಿ ಇನ್ನೊಂದು ಮಹಿಳೆಯ‌ ಮೃತದೇಹ ಪತ್ತೆಯಾಗಿದ್ದು ಇದರಿಂದ ಒಟ್ಟು ಸಾವಿನ ಸಂಖ್ಯೆ ಇದಿಗ ಎಂಟಕ್ಕೇರಿದೆ. ಗಂಗಾವಳಿ ನದಿ ತೀರದ ಉಳುವರೆ ಗ್ರಾಮದ ಸಣ್ಣಿ ಗೌಡ ಎನ್ನುವ ಮಹಿಳೆ ನಾಪತ್ತೆಯಾಗಿದ್ದರು. ಉಳಿದ ಏಳು ಜನರ ಗುರುತು ಪತ್ತೆಯಾಗಿತ್ತು. ಆದರೆ ಈ ಮೃತದೇಹ ಆಕೆಯದ್ದೇ? ಎಂದು ಅವಳ ಕುಟುಂಬಸ್ಥರು ಪತ್ತೆ ಮಾಡಬೇಕಿದೆ. ಗಂಗಾವಳಿ ನದಿಯಲ್ಲಿ ಪತ್ತೆಯಾಗಿರುವ ಮೃತದೇಹದ ಕೈಯಲ್ಲಿ ಬಳೆ ಹಾಗೂ ಬಟ್ಟೆಯ ಬಣ್ಣದ ಮೂಲಕ ಮಹಿಳೆಯನ್ನು ಪತ್ತೆಹಚ್ಚುವ ಕಾರ್ಯ ನಡೆಯಬೇಕಿದೆ. ಉಳಿದವರ ಮೃತದೇಹ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.