- +91 73497 60202
- [email protected]
- September 16, 2024 10:16 AM
ಬೆಳ್ತಂಗಡಿ: ವಿಪರೀತ ಮಳೆಗೆ ಭಾರೀ ಪ್ರಮಾಣದ ಗುಡ್ಡ ಕುಸಿತ..! ವಾಹನ ಸಂಚಾರ ಸ್ಥಗಿತ..!
ನ್ಯೂಸ್ ನಾಟೌಟ್: ರಾತ್ರಿ ಸುರಿದ ವಿಪರೀತ ಮಳೆಗೆ ಬೆಳ್ತಂಡಿಯ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಕಲ್ಲರ್ಬಿ ಎಂಬಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ರಸ್ತೆಗೆ ಬಿದ್ದಿದೆ. ಇದರಿಂದ ಈ ರಸ್ತೆಯಲ್ಲಿ ವಾಹನ ಸಂಚಾರ ಸoಪೂರ್ಣ ಬಂದ್ ಆಗಿದೆ ಎಂದು ವರದಿ ತಿಳಿಸಿದೆ. ದೊಡ್ಡ ಪ್ರಮಾಣದಲ್ಲಿ ಭೂ ಕುಸಿತವಾಗಿದ್ದು ಇಲ್ಲಿ ಇನ್ನಷ್ಟು ಕುಸಿತಗಳಾಗುವ ಅಪಾಯವಿದೆ ಎನ್ನಲಾಗಿದೆ. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಹಾಗೂ ಅರಣ್ಯ ಇಲಾಖೆಯವರು ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ