- +91 73497 60202
- [email protected]
- September 20, 2024 2:54 AM
ಕೊಡಗು: ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ..! ದೇಗುಲದ ಮೆಟ್ಟಿಲ ವರೆಗೆ ಆವರಿಸಿದ ನೀರು..!
ನ್ಯೂಸ್ ನಾಟೌಟ್: ಭಾರೀ ಮಳೆಯಿಂದಾಗಿ ಕೊಡಗಿನ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತ್ರಿವೇಣಿ ಸಂಗಮ (Triveni Sangama) ಮುಳುಗಡೆಯಾಗಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ (ಜು.29) ನಿನ್ನೆಯಿಂದ ಸುರಿದ ನಿರಂತರ ಭಾರಿ ಮಳೆಗೆ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ಭಾಗಮಂಡಲದ ಭಗಂಡೇಶ್ವರನ ಸನ್ನಿಧಿಯ ಮುಂಭಾಗದ ಮೆಟ್ಟಿಲುವರೆಗೆ ನೀರು ಆವರಿಸಿದೆ. ಭಾಗಮಂಡಲ ಸಂಪೂರ್ಣವಾಗಿ ಜಲಾವೃತವಾಗಿದ್ದು, ಕೆಳಭಾಗದ ನಾಪೋಕ್ಲು ರಸ್ತೆ ಮತ್ತು ಮಡಿಕೇರಿ ರಸ್ತೆ ಮುಳುಗಡೆಯಾಗಿದೆ. ಮಳೆ, ಗಾಳಿಯ ಆರ್ಭಟಕ್ಕೆ ಈ ಭಾಗದ ಜನರು ತೀವ್ರ ಆತಂಕಗೊಂಡಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ