ಮಂಗಳೂರು: ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸ್ಬೇಕು ಎಂದ ಭರತ್‌ ಶೆಟ್ಟಿ ..! ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಎಂದ ಶಾಸಕ..!

ನ್ಯೂಸ್ ನಾಟೌಟ್: ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಮಂಗಳೂರಿನಲ್ಲಿಂದು(ಜುಲೈ 8) ಬಿಜೆಪಿ ಯುವಮೋರ್ಚಾ ಘಟಕ ಪ್ರತಿಭಟನೆ ನಡೆಸಿತು. ಪ್ರತಿಭಟನೆ ವೇಳೆ ಬಂದ ಶ್ವಾನವನ್ನು ತೋರಿಸಿ ರಾಹುಲ್‌ ಗಾಂಧಿಗೆ ಹೋಲಿಸಿ ಲೇವಡಿ ಮಾಡಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಪ್ರತಿಕೃತಿ ಧಹಿಸಿ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ಭರತ್ ಶೆಟ್ಟಿ, “ಹಿಂದೂ ವಿರೋಧಿ ಹೇಳಿಕೆ ನೀಡಿದ ರಾಹುಲ್‌ ಗಾಂಧಿಗೆ ಪಾರ್ಲಿಮೆಂಟ್‌ ಒಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಬೇಕು, ಆಗ ಎಲ್ಲವೂ ಸರಿಹೋಗುತ್ತೆ. ಆಗ ಇದಕ್ಕೆ ಏಳೆಂಟು ಎಫ್‌ಐಆರ್ ದಾಖಲಾಗ್ತಿತ್ತು ಅಷ್ಟೇ ಎಂದಿದ್ದಾರೆ. ಮಂಗಳೂರಿಗೆ ಬಂದ್ರೆ ನಾವೇ ಅದಕ್ಕೆ ವ್ಯವಸ್ಥೆ ಮಾಡ್ತೀವಿ ಎಂದು ಹೇಳಿದ್ದಾರೆ.ರಾಹುಲ್ ಗಾಂಧಿ ಶಿವನ ಫೋಟೊ ಹಿಡಿದು ನಿಂತಿದ್ದರು. ಆ ಹುಚ್ಚನಿಗೆ ಶಿವ 3ನೇ ಕಣ್ಣು ಬಿಟ್ಟರೇ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್ಲ. ಅವರು ಹಿಂದೂ ವಿರೋಧಿ ನೀತಿಯನ್ನ ಅಳವಡಿಸಿಕೊಂಡಿದ್ದಾರೆ. ನಾವು ಅವನಿರಿಗೆ ಯಾವ ಶಬ್ದ ಪ್ರಯೋಗಿಸಬಹುದು ಅಂತ ನೋಡಿ? ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ. ಹಿಂದೂಗಳ ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅಲ್ಲಿ ಅವರು ಬೊಗಳಿದರೆ ಇಲ್ಲಿನ ನಾಯಕರು ಬಾಲ ಬಿಚ್ಚಲು ಶುರು ಮಾಡ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. Click 👇