- +91 73497 60202
- [email protected]
- September 16, 2024 8:37 PM
ವಿಧಾನಸಭೆಯಲ್ಲಿ ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದ ಕರೆದ ರಾಜೇಗೌಡ..! ಸದನದೊಳಗೆ ಮಾತಿನ ಚಕಮಕಿ..!
ನ್ಯೂಸ್ ನಾಟೌಟ್: ವಿಧಾನಸಭೆಯಲ್ಲಿ ಬಿಜೆಪಿ (BJP) ಸದಸ್ಯರ ಮಾತನ್ನು ವಿರೋಧಿಸುವ ಭರದಲ್ಲಿ ಶಾಸಕ ರಾಜೇಗೌಡ ಬಿಜೆಪಿ ಶಾಸಕ ಹರೀಶ್ ಪೂಂಜಾರನ್ನು ಗೂಂಡಾ ಎಂದು ಕರೆದಿದ್ದು, ವಿಧಾನ ಸಭೆಯಲ್ಲಿ ಕೆಲಕಾಲ ಭಾರೀ ಗದ್ದಲ ಉಂಟಾಗಿತ್ತು. ವಿಧಾನಸಭೆಯ ಸಭಾಂಗಣದಲ್ಲಿ ಸಂವಿಧಾನದ ಪೀಠಿಕೆ ಅಳವಡಿಸಿರುವ ಕುರಿತಾಗಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರು ಸ್ಪೀಕರ್ ಯು.ಟಿ ಖಾದರ್ ಗೆ ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸಂವಿಧಾನ ಪರ ಯಾರು ವಿರುದ್ಧ ಯಾರು ಎಂಬ ಬಗ್ಗೆ ಎರಡು ಕಡೆಯವರು ಆರೋಪ ಪ್ರತ್ಯಾರೋಪ ನಡೆಸುತ್ತಿದ್ದರು. ಬಿಜೆಪಿ ಸದಸ್ಯರಾದ ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಕಾಂಗ್ರೆಸ್ ಸದಸ್ಯರಾದ ಕೆ.ಜೆ ಜಾರ್ಜ್ ಹಾಗೂ ಇತರರ ನಡುವೆ ಆರೋಪ ಪ್ರತ್ಯಾರೋಪ ನಡೆಯಿತು. ತುರ್ತುಪರಿಸ್ಥಿತಿ ಜಾರಿಗೊಳಿಸುವ ಮೂಲಕ ಸಂವಿಧಾನದ ಕಗ್ಗೊಲೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿ ಆರೋಪ ಮಾಡಿದರೆ, ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ ಎಂದು ಕಾಂಗ್ರೆಸ್ ಸದಸ್ಯರು ಆರೋಪ ಮಾಡಿದರು.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ