ಪುತ್ತೂರು: ಲಾರಿಯ ಟಯರ್‌ ಬದಲಿಸುವಾಗ ಸ್ಪೋಟ..! ವ್ಯಕ್ತಿ ಗಂಭೀರ, ಆಸ್ಪತ್ರೆಗೆ ದಾಖಲು..!

ನ್ಯೂಸ್ ನಾಟೌಟ್: ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಸ್ಪೋಟಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ (ಜು.22 ) ರಾತ್ರಿ ನಡೆದಿದೆ. ಘಟನೆಯಲ್ಲಿ ಕಾಂಪೌಂಡ್‌ ಗೆ ಎಸೆಯಲ್ಪಟ್ಟು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ.