ಭೀಕರ ಚಂಡಮಾರುತ ಹಿನ್ನೆಲೆ ಟೀಮ್ ಇಂಡಿಯಾ ತವರು ಸೇರಲು ವಿಳಂಬ..! ತಾಯ್ನಾಡಿಗೆ ಬಂದ ವಿಶ್ವ ಚಾಂಪಿಯನ್ಸ್ ಗಳಿಗೆ ಅದ್ಧೂರಿ ಸ್ವಾಗತ..!

ನ್ಯೂಸ್ ನಾಟೌಟ್ : ಟಿ20 ವಿಶ್ವಕಪ್‌ ಕ್ರಿಕೆಟ್‌ (T20 World Cup) ಚಾಂಪಿಯನ್‌ ಟೀಂ ಇಂಡಿಯಾ ಇಂದು(ಜುಲೈ.1) ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ.ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ. ಜೂ. 1ರಂದು ಬಾರ್ಬಡೋಸ್‌ಗೆ ಭೀಕರ ಬೆರಿಲ್ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಭಾರತಕ್ಕೆ ಬರಲು ಆಗಿರಲಿಲ್ಲ. ಈಗ ವಿಶೇಷ​ ವಿಮಾನದ ಮೂಲಕ T20 ವಿಶ್ವಕಪ್​ ಟ್ರೋಫಿಯೊಂದಿಗೆ ಆಟಗಾರರೆಲ್ಲ ಆಗಮಿಸಿದ್ದಾರೆ.ಪದಕ ಧರಿಸಿ ಇಳಿದ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಸಿಕ್ಕಿದೆ. ಬೆಳಗ್ಗೆ 10 ಗಂಟೆಯ ವೇಳೆ ಪ್ರಧಾನಿ ಮೋದಿ (PM Narendra Modi) ಅವರ ನಿವಾಸಕ್ಕೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಮೋದಿ ಭೇಟಿಯ ಬಳಿಕ ವಿಶೇಷ ವಿಮಾನದಲ್ಲಿ ಮುಂಬೈಗೆ ಆಟಗಾರರು ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಮುಂಬೈ ಮರೀನ್‌ ಡ್ರೈವ್‌ನಿಂದ ತೆರೆದ ವಾಹನದಲ್ಲಿ ವಾಂಖೆಡೆ ಸ್ಟೇಡಿಯಂವರೆಗೆ 2 ಕಿ.ಮೀ ರೋಡ್‌ ಶೋ (Road Show) ನಡೆಯಲಿದೆ.