- +91 73497 60202
- [email protected]
- September 20, 2024 8:24 AM
ದರ್ಶನ್ ಮೇಲೆ ಮತ್ತೆ 3 ಹೊಸ ಎಫ್.ಐ.ಆರ್ ದಾಖಲು..! ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕರು ಹೇಳಿದ್ದೇನು..?
ನ್ಯೂಸ್ ನಾಟೌಟ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ವಿ ಶೇಷಮೂರ್ತಿ, ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ 9 ಜೈಲು ಅಧಿಕಾರಿಗಳನ್ನು ಸೋಮವಾರ ಅಮಾನತ್ತುಗೊಳಿಸಲಾಗಿದೆ. ಮೂರು ಎಫ್ಐಆರ್ಗಳು ಜೈಲಿನ ಆವರಣದಲ್ಲಿ ಮೊಬೈಲ್ ಫೋನ್ಗಳ ಬಳಕೆ, ಸಿಗರೇಟ್ ಬಳಕೆ ಮತ್ತು ಜೈಲಿನೊಳಗೆ ಈ ವಸ್ತುಗಳನ್ನು ಕಳ್ಳಸಾಗಣೆ ಮಾಡಿದ್ದಕ್ಕೆ ಸಂಬಂಧಿಸಿವೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ.ನಗರದ ಪರಪ್ಪನ ಅಗ್ರಹಾರದಲ್ಲಿರುವ ಸೆಂಟ್ರಲ್ ಜೈಲಿನಲ್ಲಿ ನಟ ದರ್ಶನ್ಗೆ ಜೈಲಿನೊಳಗೆ ಸಿಗರೇಟ್ ಸೇದಲು ಮತ್ತು ಕಾಫಿ ಕುಡಿಯಲು ಅವಕಾಶ ನೀಡಿದ ಇಬ್ಬರು ಜೈಲರ್ಗಳು ಸೇರಿದಂತೆ 9 ಅಧಿಕಾರಿಗಳನ್ನು ಕಾರಾಗೃಹ ಇಲಾಖೆ ಅಮಾನತ್ತುಗೊಳಿಸಿದೆ. ನಟನಿಗೆ ಸಿಗರೇಟ್, ಚಹಾ ಮತ್ತು ಕುರ್ಚಿಗಳನ್ನು ಯಾರು ಒದಗಿಸಿದ್ದಾರೆ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುವುದು. ಜೈಲು ಕೈಪಿಡಿ ಉಲ್ಲಂಘಿಸಿದ್ದರಿಂದ ದರ್ಶನ್ ವಿರುದ್ಧ ಮೂರು ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ ಹೇಳಿದರು.ಹಿರಿಯ ಐಪಿಎಸ್ ಅಧಿಕಾರಿಗಳು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ದರ್ಶನ್ ಸ್ಥಳಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ