ಬೆಂಗಳೂರು: ಮಧ್ಯ ರಾತ್ರಿ ಪಾನಮತ್ತಳಾಗಿ ದ್ವಿಚಕ್ರ ವಾಹನ ಓಡಿಸಿಕೊಂಡು ಹೋದವಳಿಗೆ ಅಪಘಾತ..! ಆಟೋ ರಿಕ್ಷಾ ಹತ್ತಿಸಿ ಕರೆದೊಯ್ದವರಿಂದ ಸಾಮೂಹಿಕ ಅತ್ಯಾಚಾರ..!

ನ್ಯೂಸ್‌ ನಾಟೌಟ್‌: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ರೇಪ್ ಮಾಡಿ ಕೊಲೆ ಮಾಡಿರುವ ಘಟನೆಯ ಬೆನ್ನಲ್ಲೇ ಕರ್ನಾಟಕದಲ್ಲೂ ನೀಚ ಕೃತ್ಯ ನಡೆದಿದೆ. ಪುಟ್ಟ ಮಕ್ಕಳು, ಯುವತಿಯರು, ಮಹಿಳೆಯರು, ಯುವಕರು ಸೇರಿದಂತೆ ಲಕ್ಷಾಂತರ ಮಂದಿ ಕತ್ತಲಲ್ಲಿ ಕ್ಯಾಂಡೆಲ್ ಹಿಡಿದು ಮಹಿಳೆಯರ ಸುರಕ್ಷತೆಗಾಗಿ ಪ್ರತಿಭಟನೆಗಳನ್ನು (Protest) ನಡೆಸುತ್ತಿದ್ದಾರೆ. ಆದರೆ ಇದರ ನಡುವೆಯೇ ಬೆಂಗಳೂರಿನಲ್ಲಿ (Bengaluru) ಹೀನಾಯ ಕೃತ್ಯ ನಡೆದಿದೆ. ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ. ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ ಅಪಘಾತವಾಗಿದ್ದು ಯುವತಿ ವಾಹನ ಬಿಟ್ಟು ಆಟೋದಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ. ಆಟೋ ಹತ್ತಿದ್ದ ಯುವತಿಯನ್ನು ಹೆಚ್‌ಎಸ್‌ಆರ್‌ ಲೇಔಟ್‌ಗೆ ಕರೆದುಕೊಂಡು ಹೋಗಿ ಗ್ಯಾಂಗ್‌ ರೇಪ್ ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಯುವತಿ ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.