ಕೇದರನಾಥಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ ಯಾತ್ರಿಕರಿಗೆ ಸಂಕಷ್ಟ..! ಇಲ್ಲಿಯವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನರ ರಕ್ಷಣೆ..!

ನ್ಯೂಸ್‌ ನಾಟೌಟ್‌: ಭಾರಿ ಮಳೆ ಹಿನ್ನೆಲೆ ಉತ್ತರಾಖಂಡದ ಕೇದಾರನಾಥಕ್ಕೆ ಕಾಲ್ನಡಿಗೆಯ ಮೂಲಕ ಸಾಗುವ ಮಾರ್ಗದಲ್ಲಿ ಸಿಲುಕಿಕೊಂಡಿರುವ ಯಾತ್ರಿಕರನ್ನು ರಕ್ಷಿಸುವ ಕಾರ್ಯಾಚರಣೆ ನಾಲ್ಕನೇಯ ದಿನವೂ ಮುಂದುವರಿದಿದ್ದು, ಯಾತ್ರಿಕರು ಸೇರಿದಂತೆ 400 ಜನರನ್ನು ರಕ್ಷಿಸಿ ಭಾನುವಾರ(ಆ.4) ಲಿಂಚೋಲಿಗೆ ಕಳುಹಿಸಲಾಗಿದೆ. ರಕ್ಷಿಸಿದ ಬಳಿಕ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‘ಇನ್ನೂ ಸುಮಾರು 350 ಜನರು ಕಾಲ್ನಡಿಗೆ ಮಾರ್ಗದಲ್ಲಿ ಸಿಲುಕಿಕೊಂಡಿದ್ದಾರೆ. 50 ಜನರು ಲಿಂಚೋಲಿಯಲ್ಲಿ ಬಾಕಿ ಉಳಿದಿದ್ದಾರೆ. ಆದಷ್ಟು ಶೀಘ್ರದಲ್ಲಿ ಸುರಕ್ಷಿತ ಸ್ಥಳಗಳಿಗೆ ಅವರನ್ನು ಸ್ಥಳಾಂತರ ಮಾಡಲಾಗುವುದು’ ಎಂದು ಉತ್ತರಾಖಂಡ ವಿಪತ್ತು ನಿರ್ವಹಣೆ ಮತ್ತು ಪುನರ್ವಸತಿ ಕಾರ್ಯದರ್ಶಿ ಹೇಳಿದ್ದಾರೆ. ಇಲ್ಲಿಯವರೆಗೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ ಎಂದರು. ‘ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ವಾಯುಸೇನೆ ನೀಡಿದ ಚಿನೂಕ್ ಹೆಲಿಕಾಪ್ಟರ್ ಅನ್ನು ರಕ್ಷಣಾ ಕಾರ್ಯಾಚರಣೆಯಲ್ಲಿ ಒಮ್ಮೆಯೂ ಬಳಸಲಾಗಲಿಲ್ಲ. ಎಂಐ17 ಹೆಲಿಕಾಪ್ಟರ್‌ ಅನ್ನು ಮಾತ್ರ ರಕ್ಷಣಾ ಕಾರ್ಯಾಚರಣೆಗೆ ಬಳಸಲಾಗುತ್ತಿದೆ’ ಎಂದು ಹೇಳಿದರು.‘ಕೆಟ್ಟ ಹವಾಮಾನದ ಹಿನ್ನೆಲೆ ಕಾಲ್ನಡಿಗೆ ಮೂಲಕವೇ ಕೇದರನಾಥದಿಂದ ಲಿಂಚೋಲಿಗೆ 400 ಜನರನ್ನು ಕರೆತರಲಾಗಿದೆ. Click