ಮಂಗಳೂರು: ಫುಟ್ಬಾಲ್ ಪಂದ್ಯದ ಜಗಳಕ್ಕೆ ವಿದ್ಯಾರ್ಥಿಗಳನ್ನು ಅಪಹರಿಸಿ, ಬಟ್ಟೆ ಬಿಚ್ಚಿಸಿ ಕ್ಷಮೆ ಕೇಳಿಸಿದ ಗ್ಯಾಂಗ್..! ಇಬ್ಬರನ್ನು ಬಂಧಿಸಿದ ಪೊಲೀಸರು..!

ನ್ಯೂಸ್ ನಾಟೌಟ್: ಮಂಗಳೂರಿನ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಕೆಲವು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ(ಆ.20) ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ನಗರದ ಜಪ್ಪು ಮಹಾಕಾಳಿ ಪಡ್ಪು ಬಳಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಿ ಉಳಿದವರಿಗಾಗಿ ಶೋಧ ಮುಂದುವರಿಸಿದ್ದಾರೆ. ನಗರದ ಎರಡು ಕಡೆ ಕರೆದೊಯ್ದು ವಿದ್ಯಾರ್ಥಿಗಳ ಬಟ್ಟೆಬಿಚ್ಚಿ, ಬಸ್ಕಿ ತೆಗೆಸಿ ಕ್ಷಮೆ ಕೇಳುವಂತೆ ಒತ್ತಾಯಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Click