ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಲೈವ್‌ ನಲ್ಲಿ ಹೃದಯಾಘಾತ..! ಕುಸಿದು ಬಿದ್ದು ಕುರುಬ ಸಂಘದ ಅಧ್ಯಕ್ಷ ಸಾವು..!

ನ್ಯೂಸ್ ನಾಟೌಟ್ : ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆಯ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರನ್ ಕುಸಿದುಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ(ಆ.19) ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ನೋಟಿಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಕುಟುಬರ ಸಂಘದ ಅಧ್ಯಕ್ಷರಾಗಿರುವ ರವಿಚಂದ್ರನ್ ಮತ್ತು ಕೆಲ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಬೆಂಗಳೂರಿನ ಲಾಲ್ ಬಾಗ್ ಅವರಣದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಆದರೆ, ರಾಜ್ಯಪಾಲರ ವಿರುದ್ಧ ಮಾತನಾಡುತ್ತಲೇ ಒಮ್ಮೆ ಶಾಕ್ ಹೊಡೆದವರಂತೆ ಮೈ ನಡುಗಿಸಿದ್ದಾರೆ. ಇದಾದ ಮರುಕ್ಷಣವೇ ಕುರ್ಚಿಯ ಮೇಲಿಂದ ಕುಸಿದು ಬಿದ್ದಿದ್ದಾರೆ. ಇನ್ನು ಅವರನ್ನು ಹತ್ತಿರ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಎಲ್ಲ ಕ್ಯಾಮೆರಾಗಳ ಮುಂದೆ ಮೈಕ್ ಹಿಡಿದು ಮಾತನಾಡುತ್ತಿರುವಾಗ ಒಮ್ಮೆ ಹೃದಯಾಘಾತ ಆಗಿದ್ದು, ಶಾಕ್ ಹೊಡೆದವರಂತೆ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನು ಅವರಿಗೆ ಸಾವರಿಸಿಕೊಳ್ಳಲೂ ಸಾಧ್ಯವಾಗಿಲ್ಲ. Click