ಜಾಮೀನು ಅರ್ಜಿ ಹಿಂದಕ್ಕೆ ಪಡೆದ ಪವಿತ್ರಾ ಗೌಡ..! ದರ್ಶನ್ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ..!

ನ್ಯೂಸ್ ನಾಟೌಟ್ : ರೇಣುಕಾಸ್ವಾಮಿ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ತಮ್ಮ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ. ಈ ನಡುವೆ ದರ್ಶನ್‌ ಮತ್ತು ಗ್ಯಾಂಗ್‌ ಸದಸ್ಯರ ನ್ಯಾಯಾಂಗ ಬಂಧನ ಅವಧಿ ಸೆ.17ವರೆಗೆ ವಿಸ್ತರಣೆಯಾಗಿದೆ. ಇಂದು(ಸೆ.13) ನ್ಯಾಯಾಂಗ ಬಂಧನದ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು. ಇಂದು ಹೈಕೋರ್ಟ್‌ ನ್ಯಾ.ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿಗಳು ಈಗಾಗಲೇ ಪ್ರಕರಣದ ಬಗ್ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಮೊದಲು ನೀವು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೀರಿ. ಹೀಗಾಗಿ ನೀವು ವಾಪಸ್‌ ಸೆಷನ್ಸ್‌ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಸೂಚಿಸಿದರು.ನ್ಯಾಯಾಧೀಶರಿಂದ ಸೂಚನೆ ಬಂದ ಹಿನ್ನಲೆಯಲ್ಲಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಜಾಮೀನು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.