- +91 73497 60202
- [email protected]
- September 19, 2024 9:33 PM
ನ್ಯೂಸ್ ನಾಟೌಟ್: ಈದ್ ಮಿಲಾದ್ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿನ ಬಿಸಿ ರೋಡ್ (BC Road) ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಮೆರೆದಿದ್ದಾರೆ. ಮಾಣಿ ಜಂಕ್ಷನ್ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಕೇಸರಿ ಶಾಲು ಹಾಕಿಕೊಂಡು ಹಿಂದೂ ಯುವಕರು ಮುಸ್ಲಿಂ ಮುಖಂಡರು ಮತ್ತು ಮಕ್ಕಳಿಗೆ ಸಿಹಿ, ಐಸ್ಕ್ರೀಂ, ನೀರಿನ ಬಾಟಲ್ ವಿತರಣೆ ಮಾಡಿದರು. ಜುಮ್ಮಾ ಮಸೀದಿಯಿಂದ ಬಂದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸ್ವೀಟ್ ಬಾಕ್ಸ್ ವಿತರಿಸಿ ಹಬ್ಬದ ಶುಭಾಶಯ ಕೋರಿದ ಘಟನೆಗೆ ಜನರು ಸಾಕ್ಷಿಯಾದರು. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ