ಬಂಟ್ವಾಳ: 20 ಕಿ.ಮೀ ದೂರದಲ್ಲಿ ಕೋಮು-ಸಂಘರ್ಷ, ಮತ್ತೊಂದೆಡೆ ಕೋಮು ಸಾಮರಸ್ಯ..! ಹಬ್ಬದ ಮೆರವಣಿಗೆಯಲ್ಲಿ ಬಂದ ಮುಸ್ಲಿಮರಿಗೆ ಸಿಹಿ ಹಂಚಿ ಶುಭಾಶಯ ಕೋರಿದ ಹಿಂದೂಗಳು

ನ್ಯೂಸ್ ನಾಟೌಟ್: ಈದ್ ಮಿಲಾದ್ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಒಂದು ಕಡೆ ಬಂಟ್ವಾಳ ತಾಲೂಕಿನ ಬಿಸಿ ರೋಡ್ (BC Road) ​ನಲ್ಲಿ ಹಿಂದೂ-ಮುಸ್ಲಿಮರ ಹೇಳಿಕೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಮತ್ತೊಂದು ಕಡೆ ಇದೇ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ಮತ್ತು ಕೊಡಾಜೆಯಲ್ಲಿ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸಿಹಿ, ಐಸ್​​ಕ್ರೀಂ, ನೀರಿನ ಬಾಟಲಿ ವಿತರಣೆ ಮಾಡಿ ಭಾವೈಕ್ಯತೆಗೆ ಮೆರೆದಿದ್ದಾರೆ. ಮಾಣಿ ಜಂಕ್ಷನ್​​ನಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಕೇಸರಿ ಶಾಲು‌ ಹಾಕಿಕೊಂಡು ಹಿಂದೂ ಯುವಕರು ಮುಸ್ಲಿಂ ಮುಖಂಡರು ಮತ್ತು ಮಕ್ಕಳಿಗೆ ಸಿಹಿ, ಐಸ್​ಕ್ರೀಂ, ನೀರಿನ ಬಾಟಲ್ ವಿತರಣೆ ಮಾಡಿದರು. ಜುಮ್ಮಾ ಮಸೀದಿಯಿಂದ ಬಂದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಬಾಂಧವರಿಗೆ ಹಿಂದೂಗಳು ಸ್ವೀಟ್ ಬಾಕ್ಸ್ ವಿತರಿಸಿ ಹಬ್ಬದ ಶುಭಾಶಯ ಕೋರಿದ ಘಟನೆಗೆ ಜನರು ಸಾಕ್ಷಿಯಾದರು. Click