ಸಿನಿಮಾ ಚಿತ್ರೀಕರಣದ ವೇಳೆ ಲೈಟ್ ಮ್ಯಾನ್ ಮೃತ್ಯು..! ಯೋಗರಾಜ್ ಭಟ್ ವಿರುದ್ಧ ದೂರು ದಾಖಲು..!

ನ್ಯೂಸ್ ನಾಟೌಟ್ : ಸಿನಿಮಾ ಚಿತ್ರೀಕರಣದ ವೇಳೆ ಸಂಭವಿಸಿದ ಅವಘಡದಲ್ಲಿ 30 ಅಡಿ ಮೇಲಿಂದ ಬಿದ್ದು ಲೈಟ್ ಮ್ಯಾನ್ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ್ ಭಟ್ ಮತ್ತು ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ವಿ.ಆರ್.ಎಲ್ ಗೋಡೌನ್ನಲ್ಲಿ ಈ ಅವಘಡ ಸಂಭವಿಸಿದ್ದು, ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ‘ಮನದ ಕಡಲು’ ಸಿನೆಮಾದ ಶೂಟಿಂಗ್ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್ನಲ್ಲಿ ಕಳೆದ 15 ದಿನಗಳಿಂದ ನಡೆಯುತ್ತಿದೆ. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ 30 ಅಡಿ ಎತ್ತರದ ಅಲ್ಯೂಮಿನಿಯಂ ರೊಸ್ಟ್ರಮ್ ಮೇಲೇರಿ ಲೈಟ್ ಬಿಚ್ಚುತ್ತಿದ್ದಾಗ ಆಯಾತಪ್ಪಿ ಮೋಹನ್ ಕುಮಾರ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು(ಸೆ.6) ಮೃತಪಟ್ಟಿದ್ದಾರೆ. Click