- +91 73497 60202
- [email protected]
- September 19, 2024 8:55 PM
ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಪ್ರಕರಣದ ಚಾರ್ಜ್ಶೀಟ್ ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಲ್ಲಿಸಿರುವ ಚಾರ್ಜ್ಶೀಟ್ ಮತ್ತು ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ಅವರಿದ್ದ ಏಕಸದಸ್ಯ ಪೀಠ, ಯಾವುದೇ ರಹಸ್ಯ ಮಾಹಿಯನ್ನು ಪ್ರಾಸಾರ ಮಾಡದಂತೆ ನಿರ್ಬಂಧ ವಿಧಿಸಿ ಆದೇಶಿದೆ. ಅಲ್ಲದೆ, ಮೇಲಿನ ಆದೇಶ ಉಲ್ಲಂಘಿಸಿದರೆ ಕ್ರಮಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಗೆಯೇ ಈ ಆದೇಶವನ್ನು ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ